Monday, May 25, 2015

ಮುಂದೇನು ???







ನಾಳೆ ಏನಾಗುವುದು ಎಂದು ಯಾರೂ ಅರಿಯರು 
ಇಂದು ಏನಾಗುವುದು ಎಂಬ ಕುರುಹು ಅರಿಯರು 
ಇಂದು-ನಾಳೆಗಳ ಮಧ್ಯೆ ಮುಂದಿನ ಜೀವನ ಅಗೋಚರ ! 

ಸೀತಾ ಮಾತೆಯಂತಹವರೆ ತನ್ನ ಬದುಕು ಕಾಡಿನಲ್ಲಿ 
ಅದು ಕೂಡ ತುಂಬು ಗರ್ಭಿಣಿಯನ್ನು ಶ್ರೀ ರಾಮಚಂದ್ರ 
ಕಾಡಿಗಟ್ಟ ಬಹುದು ಎಂಬ ಒಂಚೂರು ಸುಳಿವು ಇಲ್ಲದೆ
ದಿಕ್ಕೇ ತೋಚದದವಳಂತೆ ತನ್ನ ಬಸಿರು-ಬಾಣಂತನ ವನ್ನು 
ಶ್ರೀ ವಾಲ್ಮೀಕಿ ಗಳ ಆಶ್ರಮದಲ್ಲಿ ತನ್ನ ಮಕ್ಕಳ 
ಲಾಲನೆ-ಪಾಲನೆ ಪೋಷಣೆಯಲ್ಲಿ 
ಲವ-ಕುಶರೀರ್ವರ ಜೊತೆ ಕಳೆದಳು 

ದ್ರುಪದನ ಮಗಳು ದ್ರೌಪದಿ ಸಹಾ ತಾನು 
ಪಂಚ-ಪಾಂಡವರ ಒಬ್ಬಳೇ ಮಡದಿ ಆಗುತ್ತೇನೆಂದು 
ಕನಸು-ಮನಸ್ಸಿನಲ್ಲೂ ಅರಿತವಳಲ್ಲ ಪಾಪ 
ಪೌರಾಣಿಕ ಯುಗದಲ್ಲೂ ಕುರುಹು ನೀಡದ 
ಇಂದು-ನಾಳೆಗಳು ನಮಗೆಲ್ಲಿಯ ಮುನ್ಸೂಚನೆ ನೀಡುತ್ತದೆ?
ಆದ್ದರಿಂದ ಇಂದು-ಇಂದಿಗೆ; ನಾಳೆ-ನಾಳೆಗೆ 
ಮುಂದು ಸಹಾ ನಮ್ಮದೇ ಎಂದು 
ಶಾಂತ-ಚಿತ್ತತೆ ಇಂದ 'ಜೀವನವ' 
ಜೀವ ಇರುವವರೆಗೂ ಸವೆಸಬೇಕು !
ಇದುವೇ ಜೀವ ; ಇದು ಜೀವನ


No comments:

Post a Comment