Wednesday, October 7, 2015

ಸ್ಮಾರ್ಟ್ ಫೋನ್


ಇತ್ತೀಚಿಗೆ ಒಂದೆರಡು ದಿನಗಳ ಮಟ್ಟಿಗೆ  ರೈಲಿನಲ್ಲಿ  ಪ್ರಯಾಣ ಮಾಡುವ ಅವಕಾಶ ಒದಗಿ  ಬಂದಿತ್ತು .  ಯಾಕೆ ಹೀಗೆ ಹೇಳುತ್ತಿರುವೆ  ಎಂದರೆ ಅಪರೂಪಕ್ಕೆ  ಟ್ರೈನಿನಲ್ಲಿ  ಪ್ರಯಾಣ ಮಾಡುತ್ತೇವೆ ಉಳಿದಂತೆ ಬಸ್ ಪ್ರಯಾಣ ತುಂಬಾ ಇದ್ದೆ ಇರುತ್ತದೆ.   ಬೆಂಗಳೂರಿನಿಂದ  ಶಿವಮೊಗ್ಗ ಗೆ ಹೊರಡುವ ಟ್ರೈನ್ ಹೊರಡಲು ಇನ್ನು ಬಹಳ ಸಮಯ ಇತ್ತು.  ಪುಣ್ಯಕ್ಕೆ ಟ್ರೈನ್ ಕೂಡ ಖಾಲಿ ಇದ್ದಿದ್ದರಿಂದ ಸೀಟ್ ಕೂಡ ಸಲೀಸಾಗಿ ಸಿಕ್ಕಿ ಬಿಟ್ಟಿ ತ್ತು .   ನಮ್ಮ ಕಂಪಾರ್ಟ್ ಮೆಂಟಿನಲ್ಲಿ  ನಮ್ಮ ಎದುರು ಬದುರು ಒಂದು ಮುಸ್ಲಿಂ ಫ್ಯಾಮಿಲಿ ಕುಳಿತ್ತಿದ್ದರು .  ಅವರ ಇಬ್ಬರು ಮಕ್ಕಳು ಉರ್ದುವಿನಲ್ಲಿ ನನ್ನೊಂದಿಗೆ  ಮಾತನಾಡಲು ಪ್ರಯತಿಸುತ್ತಿದ್ದರು .  ನನಗೆ ಸ್ವಲ್ಪ ಮಟ್ಟಿಗೆ  ಹಿಂದಿ  ಬರುತ್ತಿದ್ದುದರಿಂದ  ಅವರೊಟ್ಟಿಗೆ  ಮಾತನಾಡುತ್ತಾ  ಪ್ರಯಾಣ  ಮಾಡಿದ್ದೆ   ಗೊತ್ತಾಗಲಿಲ್ಲ .  ಇದರ ಮಧ್ಯದಲ್ಲಿ ಕಾಫಿ  ಟೀ  , ಮದ್ದೂರ್ ವಡೆ , ಚು ರು ಮುರಿ , ಸೇವನೆ ನಡಿತಾನೆ ಇತ್ತು.   ಮಕ್ಕಳೊಂದಿಗೆ ಮಾತನಾಡುತ್ತ ಆ ಕಡೆ ಈ ಕಡೆ ಕಣ್ಣು ಹಾಯಿಸುತ್ತಿದ್ದಂತೆ ಎಲ್ಲರ ಕೈಯಲ್ಲೂ   ಸ್ಮಾರ್ಟ್ ಫೋನ್ ಕಂಡು  ಬಂತು .   ಆ ಎರದು ಮಕ್ಕಳು ಸುಮಾರು ೬ ವರುಷ ಹಾಗೂ ೯ ವರ್ಷದವರು , ೧ನೆ ಹಾಗೂ ೩ನೆ ತರಗತಿ ಅವರ ಅಪ್ಪ ಅಮ್ಮನ ಮೊಬೈಲ್ ತೆಗೆದು ಕೊಂಡು  ಗೇಮ್ಸ್ ಆಡ್ತಾ ಇದ್ದರು.                          ಇನ್ನು ಒಂದು ತಮಾಷೆ ಅಂದರೆ ಅವರ ಅಪ್ಪ ಅಮ್ಮ ನೋಡಲಿಕ್ಕೆ ಅನಕ್ಷ ರಸ್ತರು  ಎನಿಸುತ್ತಿತ್ತು .  ಇದು ಹೇಗೆ  ತಿಳಿಯಿತು ಎಂದರೆ ಅವರಿಗೆ ಕಾಲ್ ಬಂದಾಗ ಅಟೆಂಡ್ ಮಾಡಲಿಕ್ಕೆ ಗೊತ್ತಾಗುತ್ತಿರಲಿಲ್ಲ !!  ಅ ಮಕ್ಕಳೇ ಗ್ರೀನ್ ಕಲರ್ ಬಟನ್   swipe   ಮಾಡಿ ಕೊಟ್ಟು ಮಾತನಾಡಲು ಹೇಳಿ ಅವರೇ ಕಾಲ್ ಎಂಡ್ ಮಾಡಿ ನಂತರ ಆಟ ಆಡಲು ಶುರು ಮಾಡುತ್ತಿದ್ದರು .   ಆಗ ಕೇಳಿದೆ ಯಾಕೆ ಅಪ್ಪ ಅಮ್ಮನಿಗೆ ಫೋನ್ operate  ಮಾಡಲು  ಬರುವುದಿಲ್ಲವೇ ಎಂದು,  ಆ ಮಕ್ಕಳು   ನಹಿ ಜಾನತೇ ಅಂತ ಹೇಳಿದರು .  ಅದೇ ರೀತಿ ಟ್ರೈನಿನಲ್ಲಿ  ಕಡ್ಲೆಕಾಯಿ  ಮಾರುವ ಹೆಂಗಸು , ಸುಮಾರು ಜನ  ತಮಗೆ ಫೋನ್ ಉಪಯೋಗಿಸಲು ಬರದಿದ್ದರೂ  ಸ್ಮಾರ್ಟ್ ಫೋನ್ ನ ಬಳಕೆ ಎಷ್ಟರ ಮಟ್ಟಿಗೆ ಆವರಿಸಿದೆ ಎಂದು ಟ್ರೈನಿನ  ಪ್ರಯಾಣದಲ್ಲಿ ನಮಗೆ ಅರಿವಾಯಿತು .    ಒಬ್ಬಾಕೆ  ಹೂ ಕೂಡ ಮಾರಿಕೊಂಡು ನಮ್ಮ ಕಂಪಾರ್ಟ್  ಮೆಂಟಿನಲ್ಲಿ ಓಡಾಡುತ್ತಿದ್ದಳು . ಆಕೆ  ಫೋನಿನಲ್ಲಿ ಮಾತನಾಡುತ್ತಾ  ಕರೆ ಕಟ್ ಆಯಿತು.   ಆಕೆ ನನ್ನ ಮಗಳಿಗೆ ಕಾಲ್ ಹಚ್ಚಿಕೊಡಿ  ಎಂದು ತನ್ನ ಫೋನ್ ಕೊಟ್ಟಳು .    ಆಕೆಯ  ಮಗಳ ಹೆಸರು ಪಾರ್ವತೀ ಎಂದು ಕಾಂಟ್ಯಾಕ್ಟ್ಸ್  ಇಂದ ತೆಗೆದು ಅವಳ ಮಗಳಿಗೆ ಕರೆ ಮಾಡಿ ಕೊಟ್ಟೆ  .   ಅವಳು ಮಾತನಾಡಿದ  ನಂತರ ಅವಳ ಅಳಿಯನೊಡನೆ  ಮಾತನಾಡಲು ಮತ್ತೆ ನನ್ನ ಕೈಗೆ ಫೋನ್ ಕೊಟ್ಟು   ಚಂದ್ರು ಎಂದು ಹೇಳಿದಳು .  ಮತ್ತೆ ಫೋನಾಯಿಸಿ ಅವಳಿಗೆ ಕೊಟ್ಟೆ   ಕಾಲ್ ಮುಗಿದ ನಂತರ  ಒಂದು  ಥ್ಯಾಂಕ್ಸ್ ಹೇಳಲು ಮರೆಯಲಿಲ್ಲ ಆ ಹೂವಾಡಗಿತ್ತಿ ,  ಅಮ್ಮಾವ್ರೇ  ತುಂಬಾ ಥ್ಯಾಂಕ್ಸ್ ಎಂದು ಬಹಳ ಮುಗ್ದತೆ ಇಂದ  ಹೇಳಿದಳು .  ಆಗ ನನಗಾದ ಆನಂದ ಅಷ್ಟಿಷ್ಟಲ್ಲ  !   ಏನೇ ಆದರೂ  ಈ ಸ್ಮಾರ್ಟ್  ಫೋನ್ ಹಾವಳಿ ಎಲ್ಲೆಲೂ   ಹರಡಿ ತನ್ನ ಇರುವಿಕೆಯನ್ನು ರಾರಾಜಿಸುತ್ತಿದೆ  !    ಒಂದು ಸಮೀಕ್ಷೆಯ ಪ್ರಕಾರ  ಈ ೨೦೧೫ ರ  ಕೊನೆಗೆ ೨,೦೦೦ ಬಿಲಿಯನ್   users  ಇದ್ದಾರೆ ಎಂದು ತಿಳಿದು ಬಂದಿದೆ !!!!!ಜೈ  ಸ್ಮಾರ್ಟ್ ಫೋನ್   

Wednesday, September 23, 2015

ಅರಿಶಿನ ಕುಂಕುಮ


ಹಿಂದೆಲ್ಲ ಮನೆಗೆ ಯಾರೇ ಮುತ್ತೈದೆ  ಬಂದರೂ ಸಹ ಎಷ್ಟೇ ಕಡು ಬಡವರ ಮನೆಯಲ್ಲೂ  ಅರಿಶಿನ ಕುಂಕುಮ  ಹರಿವಾಣ ವನ್ನು ದೇವರ ಮನೆ ಇಂದ ತಂದು ಅರಿಶಿನ ಕುಂಕುಮ ಹೂ ಕೊಡದೆ  ಮುತ್ತೈದೆಯನ್ನು ಕಳುಹಿಸಿ ಕೊಡುತ್ತಿರಲಿಲ್ಲ.  ಮನೆಗೆ  ಮುತ್ತೈದೆ  ಬಂದರೆ ಲಕ್ಷ್ಮಿ ಬಂದಂತೆ ಎಂದು ನಮ್ಮಮ್ಮ ಯಾವಾಗಲು ಹೇ ಳು ತ್ತಿದ್ದರು .  ಒಂದು ಸ್ಟೀಲ್ ತಟ್ಟೆ  ಅದರಲ್ಲಿ ಎರಡು ಸ್ಟೀಲ್ ಅರಿಶಿನ ಕುಂಕುಮದ ಬಟ್ಟಲು ದೇವರ ಮುಂದೆ  ಸದಾ ಇರುತ್ತಿತ್ತು.   ಅಮ್ಮ ಅಕ್ಕ ಪಕ್ಕ ಮನೆಯವರು ನೆಂಟರಿಷ್ಟರು  ಯಾರೇ ಬಂದರು ಕುಂಕುಮ ಹೂ ಕೊಡುತ್ತಿದ್ದರು .  ನೆಂಟರಿಷ್ಟರು ಬಂದರೆ ತಾಂಬೂಲ  ಕೊಡಬೇಕಾಗುತಿತ್ತು .  ಆದರೆ ಆಗಿನ ಪರಿಸ್ತಿತಿ ಅಷ್ಟೊಂದು ಚೆನ್ನಾಗಿರಲಿಲ್ಲ  ಅಗ ಅಮ್ಮ ತುಂಬಾ ಬೇಸರ ಪಟ್ಟು ಕೊಂಡಿದ್ದುಂಟು .   ಬಂದವರಿಗೆ  ಒಂದೊಳ್ಳೆ   ರೀತಿ  ಆದರಿಸಲಾಗಲಿಲ್ಲ , ನಮ್ಮ ಸ್ತಿತಿ ಸುಧಾರಿಸು ಭಗವಂತ  ಎಂದು ಪ್ರತಿನಿತ್ಯ  ಎರಡು ಹೊತ್ತು ದೇವರಿಗೆ ದೀಪ ಹಚ್ಚುವಾಗ ಬೇಡಿ ಕೊಂಡು  ನಮ್ಮಗಳ ಕೈಲಿ ಕೂಡ ಪ್ರತಿ ನಿತ್ಯ ದೇವರ ನಾಮಗಳನ್ನು ಹಾಡಿಸಿ ಬೇಡಿ ಕೊಳ್ಳುವಂತೆ  ಹೇಳುತ್ತಿದ್ದರು .  ನಾವು ಕೂಡ ಅಷ್ಟೇ ಭಕ್ತಿ ಇಂದ ದೇವರಲ್ಲಿ ನಮ್ಮ ಮೊರೆ  ಕೇಳಿಸದೆ  ಭಗವಂತ ಎಂದು ಅವನ ನ್ನು    ಪ್ರಶ್ನಿಸುತ್ತಿದ್ದೆವು.

ಆದರೆ ಬೇಸರದ ಸಂಗತಿ ಎಂದರೆ ಈಗ ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಬೆಳ್ಳಿಯ ಹಾರಿವಾಣ  ಅದರಲ್ಲಿ ಬೆಳ್ಳಿಯ ಬಟ್ಟಲಿನಲ್ಲಿ ಅರಿಶಿನ ,ಕುಂಕುಮ,  ಚಂದನ, ಅಕ್ಷತೆ , ಗಂಧ  ಇವೆಲ್ಲವೂ ಸಾಲಂಕೃತ  ವಾಗಿ ಜೋಡಿಸಿಟ್ಟಿ ರುತ್ತಾರೆ  ಆದರೆ ಅದೆಲ್ಲ ಹಬ್ಬ ಹುಣ್ಣಿಮೆಗಳಂದು  ಆಹ್ವಾನಿತ  ಮುತ್ತೈದೆ ಯರಿಗೆ ನೀಡುತ್ತಾರೆ .   ಉಳಿದಂತೆ ಬೇರೆ ದಿನಗಳಲ್ಲಿ  ಯಾರೇ ಮುತ್ತೈದೆ  ಬಂದರೂ ಅದರಲ್ಲೂ ಮಂಗಳವಾರ , ಶುಕ್ರವಾರಗಳೇ ಆಗಲಿ  ಬರಿದೆ ಮಾತನಾಡಿಸಿ ಕಳುಹಿಸುತ್ತಾರೆ .   ಆದರೆ ನಮ್ಮ ಮನೆಗಳಲ್ಲಿ ಅರಿಶಿನ ಕುಂಕುಮ ಹೂ ಕೊಡದೆ  ಮುತ್ತೈದೆಯರನ್ನು  ಹಾಗೆ ಕಳುಹಿಸುವುದಿಲ್ಲ .  ಈ ಗಲೂ  ನಮ್ಮ ತಾಯಿ ಹೇಳಿ ಕೊಟ್ಟಿದ್ದನ್ನು  ಚಾಚೂ ತಪ್ಪದೆ ಪಾಲಿಸುತ್ತಾ  ಬರುತ್ತಿದ್ದೇವೆ .  ಆ ಭಗವಂತನ ಕರುಣೆ ಇಂದ ಈಗಲೂ ಇಂತಹ ಸು ಸಂಸ್ಕಾರಗಳನ್ನು   ನಡೆಸಿ ಕೊಂಡೆ ಹೋಗುತ್ತಿದ್ದೇವೆ .   ಯಾಕ್ ಹೀಗೆ ನಮ್ಮ ಜನ ಒಳ್ಳೆಯ ಸಂಪ್ರದಾಯ ಗಳನ್ನ ಬಿಡುತ್ತ ಬರುತ್ತಿದ್ದಾರೆ .  ಈ ಬೆಳವಣಿಗೆಗಳು  ಶುಭ ಸೂಚಕವಲ್ಲ .   ಕೆಲವು  ಹೆಂಗಸರಂತೂ  ಹಣೆಗೆ ಕುಂಕುಮ ಇಲ್ಲಾ  , ತಲೆಗೆ ಹೂ ಮುಡಿ ಯುವುದಿಲ್ಲ,  ಕಾಲಿಗೆ ಕಾಲುಂಗರ ತೊಡುವುದಿಲ್ಲ , ಕೈಗಳಿಗೆ ಬಳೆಗಳನ್ನು  ಕೇಳಲೇ ಬೇಡಿ .   ನಾನು ತಲೆ ತುಂಬಾ ಹೂ ಮುಡಿದು , ಕೈ ತುಂಬಾ ಗಾಜಿನ ಬಳೆ ಗಳನ್ನೂ ತೊಟ್ಟಿದ್ದರೆ  ನನ್ನ ಮಕ್ಕಳೇ ''ಅಮ್ಮ ಈ ರೀತಿ ಬಂದರೆ ನಿನ್ನನ್ನು ಹಳ್ಳಿ ಗಮಾರಿ  ಅಂತ ತಿಳ್ಕೋತಾರೆ ಎಲ್ಲರೂ ,  ಹೂ ಒಂದೇ ಒಂದು ಮುಡ್ ಕೊ , ಎರಡೆರಡು ಬಳೇ ಗಳು ಸಾಕು , ಇದೆಲ್ಲ ಪಾರ್ಟಿ manners  ಅಮ್ಮ ತಿಳ್ಕೊ  ಅನ್ತಾರೆ;    ದೇವಸ್ತಾನಕ್ಕೆ  ಬೇಕಾದರೆ ನಿನ್ನ ಇಷ್ಟ ಬಂದಂತೆ  ಉಡು , ತೊಡು  ಓಕೆ ಅಂತಾರೆ '' .  ಶ್ರೀ ಹರಿ ಇದೇನಪ್ಪ ನಮ್ಮ ಮುಂದಿನ ಪರಂಪರೆಗೆ ಇವೆಲ್ಲ ಹೊರಟೆ ಹೋಗುತ್ತೆ ಅಂತ ಭಯ ಹುಟ್ಟುತ್ತಿದೆ !!!    ಆರೇ ಎಫ್ ಎಮ್  ನಲ್ಲಿ  ಇದೆ ಹಾಡೇ ಬರ ಬೇಕೇ ನನ್ನ ಅದೃಷ್ಟಕ್ಕೆ ''ಹೆಣ್ಣು  ಎಂದರೆ ಹೇಗಿರಬೇಕು ?  ಹಣೆ ಯಲ್ಲಿ ಕುಂಕುಮ ಧರಿಸಿರಬೇಕು ,  ಅರಿಶಿನ ಕೆನ್ನೆಯ ತುಂಬಿರ ಬೇಕು , ಮೈ ತುಂಬಾ ಸೆರಗನ್ನು ಹೊದ್ದಿರಬೇಕು '' ಅಣ್ಣಾವ್ರ ಹಾಗೂ ಮುದ್ದು ಮೊಗದ ಭಾರತಿಯ  ಆ ಜೋಡಿ ಅದೆಷ್ಟು ಸುಂದರ !  ನೆನಪುಗಳೇ ಅತಿ ಮಧುರ ಅಲ್ಲವೇ ?

ಜಯ ದೇವ ಜಯ ದೇವ ಶ್ರೀ ಗಣಪತಿ ರಾಯ






ಧಾರ್ಮಿಕತೆಯ  ಹೆಸರಿನಲ್ಲಿ ಮಾನವೀಯತೆ ಮೆರೆದ ಗೋಕಾಕ್ ನಲ್ಲೊಂದು ಗಣಪತಿ  ಯುವಕ ಸಂಘದಿಂದ ಸ್ಮಶಾನ ಕಾಯುವ ಸೋಮಯ್ಯ  ಪೂಜಾರಿ ಎಂಬವವರಿಗೆ ನಾಲಕ್ಕೂ  ಲಕ್ಷ ರೂಪಾಯಿಗಳಿಂದ ಒಂದು ಸುಂದರ ಗೃಹವನ್ನು ನಿರ್ಮಿಸಿ ಗಣಪತಿ ಹಬ್ಬದಂದು ಅವರಿಗೆ ಹಸ್ತಾಂತರಿಸಿದ ಒಂದು ಘಟನೆಯನ್ನು ಖಾಸಗಿ ಚಾನೆಲ್ ಒಂದರಲ್ಲಿ ನೋಡಿ ಹೃದಯ ತುಂಬಿ ಬಂತು . ೪ ಹೆಣ್ಣು ಮಕ್ಕಳ ತಂದೆ ಯಾದ ಸೋಮಯ್ಯ ನವರು ಪತ್ನಿ ಮತ್ತು ಪುತ್ರಿಯರೊಡನೆ  ಸ್ಮಶಾನ ಕಾಯುವ ಕಾಯಕದಿಂದ ಜೀವನ ನಡೆಸುತ್ತಿದ್ದರು .  ಅವರಿಗೆ ಸೂರು ಕಲ್ಪಿಸಿ ಹೆಂಡತಿ ಮಕ್ಕಳೊಡನೆ ನೆಮ್ಮದಿಯ  ಬಾಳು ನಡೆಸುವಂತೆ  ಮಾಡಿ ಕೊಟ್ಟ ಗಣಪತಿ ಯುವಕ ಸಂಘದವರು ಕಳೆದ ೨೬ ವರುಷಗಳಿಂದ ಈ ರೀತಿ ಸಮಾಜಮುಖಿ ಕಾರ್ಯಕ್ರಮಗಳನ್ನು ಮುಂದುವರಿಸಿ ಕೊಂಡು  ಬರುತ್ತಿದ್ದಾರೆ .  ಅವರು ಇದೆ ರೀತಿಯ ಒಳ್ಳೊಳ್ಳೆ  ಯೋಜನೆಗಳನ್ನು ಆಯೋಜಿಸಿ ಅರ್ಹರಿಗೆ ಈ ರೀತಿ ಸಹಾಯ ಹಸ್ತ ಚಾಚುತ್ತಿರುವುದು ಪ್ರಶಂಸನೀಯ .  ಆ ವಿಘ್ನ ವಿನಾಶಕ  ಗಜಮುಖನು ಇವರ ಈ  ಸಮಾಜಮುಖಿ ಕಾರ್ಯಗಳಿಗೆ ಇನ್ನು ಹೆಚ್ಚಿನ ಹಣವನ್ನು , ಸಹಕಾರವನ್ನು ಅಲ್ಲಿನ ಜನರಿಂದ ಒದಗಿಸಿ ಅರ್ಹರಿಗೆ ಸೂರು ಇಲ್ಲದವರಿಗೆ ದೀನರಿಗೆ ಒಂದು ಸೂರು ದೊರಕಿಸಿ ಕೊಡುವಂತೆ ಆಶಿರ್ವಾದ ನೀಡಲಿ.  ಇಂತಹ ಸಂಘಗಳು ಅತಿ ಹೆಚ್ಚಿನ ಸಂಖೆಯಲ್ಲಿ  ಮುಂದೆ ಬರಲಿ.   ಧಾರ್ಮಿಕತೆಯ  ಹೆಸರಿನಲ್ಲಿ  ಆಡಂಬರ ದ ಸದ್ದು ಗದ್ದಲ ತೋರದೆ ಇವ ರುಗಳು ನಡೆದ ಹಾದಿಯಲ್ಲಿ,  ಎಲ್ಲ ಸಂಘಗಳು ಇದನ್ನು ಆದರ್ಶವಾಗಿ ಟ್ಟು  ಕೊಂಡು ಮುಂಬರುವ  ದಿನಗಳಲ್ಲಿ ಈ ರೀತಿ ಕೈಂಕರ್ಯ ಗಳನ್ನ ಮುಂದುವರಿಸಿ ಕೊಂಡು ಹೋದಲ್ಲಿ ನಮ್ಮದು ರಾಮ ರಾಜ್ಯ ವಾಗುವುದರಲ್ಲಿ ಸಂದೇಹವೇ ಇಲ್ಲ .    ಜಯ ದೇವ ಜಯ ದೇವ ಶ್ರೀ ಗಣಪತಿ ರಾಯ ಜಯ ಗಣಪತಿ ರಾಯ ಜಯ ಕಾರಕ ಭಾವ ಹಾರಕ ಓಂಕಾರ ಕಾಯ : ಜಯ ದೇವ ಜಯ ದೇವ ಜಯ ದೇವ ಜಯ ದೇವ . ಸಾರ್ವ  ಜನಿಕರು ಇಂತಹ ಕಾರ್ಯಗಳಿಗೆ ತಮ್ಮ ಒಪ್ಪಿಗೆ ಸೂಚಿಸುವದರ ಮೂಲಕ  ಇದನ್ನು ಲೈಕಿ ಸ ಬೇಕಾಗಿ ಕೋರಿಕೆ .  

Tuesday, August 25, 2015

ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಅಮಾಯಕರಂತೆ ನಡೆದು ಕೊಂಡು ನಮ್ಮ ಮನಸ್ಸು ಗೆಲ್ಲುತ್ತಾರೆ
ತಮ್ಮ ಬೇಳೆ ಬೆಂದ ನಂತರ ಅವರ ರಿಯಲ್ ಸ್ವರೂಪ ತೋರಿಸುತ್ತಾರೆ !! ಎಂತಹ ಜನರಿವರು

ಒಳ್ಳೆಯವರಿಗಿದು ಕಾಲವಲ್ಲ ಶ್ರೀ ಹರಿ ನೀನೆ ಕಾಪಾಡ ಬೇಕು

ಇಷ್ಟು ಕೊಟ್ಟರೆ ಅಷ್ಟು ಬೇಕೆಂಬರು , ಅಷ್ಟು ಕೊಟ್ಟರೆ ಮತ್ತಷ್ಟು ಬೇಕೆಂಬರು , ಬೆರಳು ಕೊಟ್ಟರೆ ಹಸ್ತ  ನುಂಗಿದರು ಎಂಬಂತೆ

ಈ ಕಾಲದಲ್ಲಿ ಯಾರಿಗೂ ಸಹಾಯ ಮಾಡಬಾರದು ಅನ್ನಿಸುತ್ತೆ ಯಾಕೆಂದ್ರೆ ಸಹಾಯ ಯಾಚಿಸುತ್ತಾ ಬರುವವರು ನಮ್ಮಿಂದ ಸಹಾಯ ಪಡೆದ ನಂತರ ನಮ್ಮನ್ನು ತಿರುಗಿ ಕೂಡ ನೋಡುವುದಿಲ್ಲ  ಎಂತಹ ವಿಪರ್ಯಾಸ 

Wednesday, August 19, 2015



ಹೀಗೊಂದು ಪ್ರಹಸನ :

ಈಗ್ಗೆ ಮೂರು ವರುಷಗಳ ಹಿಂದೆ ಇದೆ ದಿನದಂದು ಅಂದ್ರೆ ನಾಗರ ಪಂಚಮಿ ದಿನದಂದು ನನ್ನ ಕಸಿನ್ ಮಗ ಅನಿರುದ್ಹ್ ಅಂತ ನಮ್ಮ ಮನೆಯಲ್ಲಿ ಇರುತ್ತಿದ್ದ ಸಮಯವದು, ಅಂದ್ರೆ ಆಗಿನ್ನೂ UKG  ಓದುತ್ತಿದ್ದ .  ಅವರ ಅಪ್ಪ ಅಮ್ಮ ಇಬ್ಬರು ಐ ಟಿ ಕಂಪನಿ ಉದ್ಯೋಗಿಗಳು ಅವರು ಆಫೀಸ್ ಬಂದ ನಂತರ ಅವರ ಜೊತೆ ಮಲಗಲು ಹೋಗುತ್ತಿದ್ದ ಅಂದರೆ ಅವನ ಊಟ ತಿಂಡಿ ರಾತ್ರಿ ಊಟ ಎಲ್ಲ ನಮ್ಮ ಮನೆಯಲ್ಲೇ ಆಗುತ್ತಿತ್ತು .     ಆಗ ಅವನಿಗೆ ಸುಮಾರು ೪ ವರುಷ ಇರಬಹುದು.  ವಿಪರೀತ ತುಂಟ , ತಂಟೆಕೋರ ಅವ.  ಆದರೆ ಊಟದ ವಿಷಯದಲ್ಲಿ ಎಂತದ್ದು ತಂಟೆ ಇರಲಿಲ್ಲ.  ಎಲ್ಲ ರೀತಿ ತಿಂಡಿ ಊಟ, ಹಣ್ಣು, ತರಕಾರಿ ಎಲ್ಲವನ್ನು ತಿನ್ನುತ್ತಿದ್ದ .  ಊಟದ ವಿಷಯದಲ್ಲಿ ಎಷ್ಟು ಅಚ್ಚು ಕಟ್ಟು ಅಂದರೆ ಹಬ್ಬ-ಹರಿದಿನ  ಹುಣ್ಣಿಮೆ- ಸಂಕಷ್ಟಿ  ದಿನಗಳಂದು ಅವನಿಗೆ ಊಟದ ಜೊತೆ ಜೊತೆಗೆ ಪಲ್ಯಗಳು, ಕೋಸಂಬರಿ, ಪಾಯಸ , ಹಪ್ಪಳ ಸಂಡಿಗೆ ಉಪ್ಪಿನಕಾಯಿ , ಗೊಜ್ಜಿನ ಚಿತ್ರಾನ್ನ, ಹಬ್ಬದ ಅಡಿಗೆ ಅಗ ಬೇಕು.   ಮೂರು ವರುಷಗಳ ಹಿಂದೆ ಇದೆ ನಾಗರ ಪಂಚಮಿ ದಿನದಂದು ಆವ ಹೇಳಿದ್ದು ಹೀಗೆ '' ಉಮ ಅಂಟಿ ನೀವು ನಾಗಪ್ಪನಿಗೆ ತನಿ ಎರೆದು ಆದ ಮೇಲೆ , ನಿಮ್ಮ ಪೂಜೆ ಎಲ್ಲಾ ಮುಗಿದ ನಂತರ'   ತಿಂಡಿ ತೀರ್ಥ ಅಂತ ಟೈಮ್ ವೇಸ್ಟ್ ಮಾಡ ಬೇಡಿ , ಯಾಕಂದ್ರೆ ಈ ದಿನ ಹಬ್ಬ ಅಡುಗೆ ಆಗಬೇಕು ಅದಕ್ಕೆ ಬೇಗ ಬೇಗ ಕುಕ್ಕರ್ ಇಟ್ ಬಿಡಿ , ಕೋಸಂಬರಿ ಮಾಡೋಕೆ ಸೌತೆಕಾಯಿ ಹಚ್ಚಿ ಕೊಡ್ತೀನಿ, ತೆಂಗಿನ ಕಾಯಿ ನಾನೇ ತುರಿದು ಕೊಡ್ತೀನಿ ನೀನೇನು ಯೋಚನೆ ಮಾಡಬೇಡ ಉಮ ಆಂಟಿ ನಾನ್ ನಿಂಗೆ ಹೆಲ್ಪ್ ಮಾಡ್ತೀನಿ, ಬೇಗ ಬೇಗ ಅಡುಗೆ ಮಾಡಿ ಅಂಕಲ್ ಗೆ, ಅಣ್ಣಂದಿರಿಗೆ ಊಟ ಮಾಡಿಕೊಂಡು ಆಫೀಸಿಗೆ ಹೋಗಲು ಹೇಳು ಆಮೇಲೆ ನಿಧಾನ ವಾಗಿ ಒಂದೊಂದೇ ಉಂಡೆ ಅಂದ್ರೆ ರವೆ ಉಂಡೆ, ಪುರಿ ಉಂಡೆ, ಎಳ್ಳಿನ ಉಂಡೆ ,ಚಕ್ಕುಲಿ ಎಲ್ಲ ಮಾಡೋಣ ನಮ್ ಅಜ್ಜಿ ಇದೆಲ್ಲ ಮಾಡ್ತಾರೆ .  ನೀನು ಮಾಡು ಉಮ ಆಂಟಿ ಅಂತ ಪೀಡಿಸ್ತ  ಇದ್ದ.  ನಾನು ''ಅಲ್ಲ ಪುಟ್ಟು ಇದೆಲ್ಲ ಅಜ್ಜಿ ಮಾಡ್ತಾರೆ ಕಣೋ ನಂಗೆ ಇವೆಲ್ಲ ಅಷ್ಟೊಂದು ಚೆನ್ನಾಗಿ ಮಾಡಲು ಬರೋಲ್ಲ '' ಅಂತ ಹೇಳಿದೆ.  ಅವನು ಕೇಳಬೇಕಲ್ಲ '' ನಂಗೆ ಅದೆಲ್ಲ ಗೊತ್ತಿಲ್ಲ ಅವೆಲ್ಲ ಮಾಡಿದ್ರೆನೇ ನಾನು ಊಟ ಮಾಡೋದು ಹೋಗು' ಅಂತ ಮುಖ ಓದಿಸಿಕೊಂಡು ಕುಳಿತ ಕಡೆಗೆ ಹೋಗಿ ಮಲ್ನಾಡ್ ಸ್ಟೋರ್ಸ್ ನಿಂದ ಅವನಿಗೆ ಏನೆಲ್ಲಾ ಬೇಕೋ ಅವೆಲ್ಲಾ  ಕೊಂದು ತಂದು , ಬಾಲೆ ಎಲೆ ಮೇಲೆ ಎಲ್ಲ ಬಡಿಸಿದ ಮೇಲೆ ಈ ಅಚ್ಚ ಕಟ್ ಬ್ರಾಹ್ಮಣ ಚೆನ್ನಾಗಿ ಊಟ ಮಾಡಿ ಎಲ್ಲವನ್ನು ತಿಂದು ತೇಗಿ ತೃಪ್ತನಾದ .  ನಂತರ ಉಮ ಅಂಟಿ ಒಂದು ಬಾಲೆ ಹಣ್ಣು ಕೊಡು ಎಂದು ತಿಂದು ಕೈ ಬಾಯಿ ತೊಳೆದು ಕೊಂಡು ಕಣ್ತುಂಬಾ ನಿದ್ದೆ ಮಾಡಿ ಸಂಜೆ ನಾಲ್ಕು ಘಂಟೆಗೆ ಎದ್ದ ಈ ಪುಣ್ಯಾತ್ಮ !!!! ನನಗೆ ಈ ದಿನ ಅನಿರುಧ್ ನೆನಪು ಬಹಳ ಬಂತು ಅವನು ಈಗ ಬೆಂಗಳೂರಿನಲ್ಲಿ ಇಲ್ಲಾ ನೆನೆಸಿಕೊಂಡಾಗ  ನೋಡಲು ಚಿಕ್ಕಮಂಗಳೂರಿನ  ಕಡುರಿಗೆ ಹೋಗಬೇಕು :) 

Thursday, August 13, 2015

ಮುತ್ತೈದೆಯರಿಗೆ ಅರಿಶಿನ ಕುಂಕುಮ ಕೊಡುವ ಪದ್ಧತಿ ಹೇಗೆ ಬಂತು ???



ಮುತ್ತೈದೆಯರಿಗೆ  ಅರಿಶಿನ ಕುಂಕುಮ ಹಾಗೂ ತಾಂಬೂಲ ಕೊಡುವ ಪದ್ಧತಿ ಹೇಗೆ ರೂಢಿಗೆ ಬಂತು ಎಂಬುದರ ಬಗ್ಗೆ ನಾನು ಚಿಕ್ಕವಳಿದ್ದಾಗ ನಮ್ಮಮ್ಮನನ್ನು  ಕೇಳುತ್ತಲೇ  ಇದ್ದೆ.  ಒಂದು ಬೇಸಿಗೆ ರಜೆಯ ದಿನ ನಮ್ಮಮ್ಮ  ಕೆಲಸ ಕಾರ್ಯಗಳನ್ನೆಲ್ಲ ಮುಗಿಸಿ ಅರಿಶಿನ ಕುಂಕುಮ ಕೊಡುವ ಪದ್ಧತಿ ಹೇಗೆ ಬಂತು ಅಂತ ಒಂದು  ಒಳ್ಳೆಯ ಕಥೆ ಇದೆ ಅದನ್ನ ನಮ್ಮಜಿ ನನಗೆ ಹೇಳ್ತಾ ಇದ್ದರು ಅದನ್ನೇ ನಾನು ನಿನಗೆ ಹೇಳ್ತೀನಿ ಅಂತ ನಮ್ಮಮ್ಮ ಈ ಕಥೆ ಹೇಳಿದ್ದರು . 
ಬಹಳ ಹಿಂದೆ ಒಂದು ಊರಿನಲ್ಲಿ ಮೂರು ಜನ ಒಂದೇ ಮನೆಯ ಅಣ್ಣ ತಮ್ಮಂದಿರು , ಒಂದೇ ಮನೆಯ ಅಕ್ಕ-ತಂಗಿಯರನ್ನು ಮದುವೆ ಮಾಡಿಕೊಂಡು ಸುಖವಾಗಿದ್ದರು . ಅವರ ತಂದೆಯ ಆಸ್ತಿಯನ್ನು ಸಿಕ್ಕಾ ಪಟ್ಟೆ, ಯದ್ವಾ ತದ್ವಾ ಪೋಲು ಮಾಡುತ್ತಾ ಹಣವನ್ನು ನೀರಿನಂತೆ ಚೆಲ್ಲುತ್ತ ಐಶಾರಾಮಿ ಜೀವನ ನಡೆಸುತ್ತಿದ್ದರು . ಆ ಮೂವರು ಅಕ್ಕ-ತಂಗಿಯರಲ್ಲಿ ದೊಡ್ಡವಳು ಎಷ್ಟೇ ಬುದ್ದಿ ಹೇಳಿದರೂ ಕೇಳದೆ ಅವಳ ತಂಗಿಯರು ಕೂಡ ಗಂಡಂದಿರೊಡನೆ ಹಣ ಪೋಲು ಮಾಡುತ್ತಾ ಇಷ್ಟ ಬಂದಂತೆ ಜೀವನ ನಡೆಸುತ್ತಿದ್ದರು.
ಆ ಮೂರು ಜನರಲ್ಲಿ  ಅಕ್ಕ ತುಂಬಾ ಒಳ್ಳೆಯವಳಾಗಿದ್ದು , ದೇವರಲ್ಲಿ, ಗುರು ಹಿರಿಯರಲ್ಲಿ ಭಕ್ತಿ ಹೊಂದಿದವಳಾಗಿದ್ದು ಒಳ್ಳೆಯ ಹೃದಯವಂತಿಕೆಯ ಸಾಧ್ವಿ . ಅವಳ ದಿನಚರಿ ಪ್ರತಿ ನಿತ್ಯ ಬೆಳಿಗ್ಗೆ ಸೂರ್ಯೋದಯಕ್ಕೆ ಮುನ್ನ ಎದ್ದು ಸ್ನಾನ ಮಾಡಿ ಮುಂಬಾಗಿಲಿಗೆ ದೊಡ್ಡ ದೊಡ್ಡ ರಂಗೋಲಿ ಹಾಕಿ , ದೇವರ ಪೂಜೆ ಮಾಡಿ, ಮನೆಯನ್ನು ಶುಚಿಗೊಳಿಸಿ ನಂತರ ಅಡುಗೆ ಕೆಲಸಕ್ಕೆ ಮುಂದಾಗುತ್ತಿದ್ದಳು . ಅವಳ ತಂಗಿಯರು ಬಹಳಾ ಸೋಮಾರಿಗಲಾಗಿದ್ದು ಅವಳ ಯಾವುದೇ ಕೆಲಸಕ್ಕೂ ಸಹಾಯ ಮಾಡದೆ ತಿಂದು ಉಂಡು ಹಣವನ್ನು ತಮಗಿಚ್ಚೆ ಬಂದಂತೆ ಪೋಲು ಮಾಡುತ್ತಾ ಅಕ್ಕನನ್ನು ಕೆಲಸದವಳಂತೆ ನಡೆಸಿ ಕೊಳ್ಳುತ್ತಿದ್ದರು .
ಇದನ್ನು ಕಂಡ ಸಾಕ್ಷಾತ್ ಲಕ್ಷ್ಮಿಗೆ ಇವರ ಮೇಲೆ ಬಹಳ ಕೋಪ ಬನ್ದಿತು. ನಾನ್ಯಾಕೆ ಇವರ ಮನೆಯಲ್ಲಿ ಕಾಲು ಮುರಿದುಕೊಂಡು ಬಿದ್ದಿರ ಬೇಕು ? ನನ್ನ ಮೇಲೆ ಅಗೌರವ ತೋರುವವರ ಮನೆಯಲ್ಲಿ ನಾನು ಇರಬಾರದು ಎಂದು ನಿರ್ಧರಿಸಿದಳು . ಬೆಳ್ಳಂ ಬೆಳಿಗ್ಗೆ ಮನೆ ಇಂದ ಹೊರ ಹೋಗುವ ನಿರ್ಧಾರ ಮಾಡಿ ಬೆಳಿಗ್ಗೆ ಆಗುವುದೇ ತಡ ಭ ರ ಭರನೇ ಅಲ್ಲಿಂದ ಹೊರಡಲು ಯತ್ನಿಸಿದಳು . ಮುಂಬಾಗಿಲಲ್ಲಿ ರಂಗೋಲಿ ಹಾಕುತ್ತಿದ್ದ ಅಕ್ಕ ಲಕ್ಷ್ಮಿಯನ್ನು ತಡೆದಳು. ''ತಾಯಿ ಯಾಕಿ ಕೋಪ , ಯಾಕೆ ನಮ್ಮನ್ನು ತೊರೆದು ಹೋಗುವ ಈ ನಿರ್ಧಾರ ? '' ಎಂದು ಪ್ರಶ್ನಿಸಿದಳು . ಅಗಾ ಸಾಕ್ಷಾತ್ ಲಕ್ಷ್ಮಿ ''ನಿನ್ನ ಗಂಡ, ಅವನ ತಮ್ಮಂದಿರು, ಹಾಗೂ ನಿನ್ನ ತಂಗಿಯರು ಸಹಾ ನನಗೆ ಗೌರವ ಕೊಡದೆ ನನ್ನನ್ನು ತುಚ್ಚವಾಗಿ ಕಾಣುತ್ತಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಬೇಕೆಂದರೆ ನಾನು ಇಲ್ಲಿಂದ ಹೋಗಲೇ ಬೇಕು, ನನ್ನನ್ನು ತಡೆಯಬೇಡ ಎಂದಳು . ಅಕ್ಕ ಎಷ್ಟೇ ಪರಿ ಪರಿಯಾಗಿ ಬೇಡಿಕೊಂಡರೂ ಲಕ್ಷ್ಮಿಯ ಮನ ಕರಗಲಿಲ್ಲ. ಆಗ ಅಕ್ಕ ''ತಾಯಿ ನನ್ನಿಂದ ನಿನ್ನ ನಿರ್ಧಾರ ಬದಲಿಸಲು ಆಗುತ್ತಿಲ್ಲ , ದಯ ಮಾಡಿ ನನ್ನ ಒಂದು ಕೋರಿಕೆ ನಡೆಸಿ ಕೊಡು , ನೀನು ಮುತ್ತೈದೆ ಆದ್ದರಿಂದ ಅರಿಶಿನ ಕುಂಕುಮ ತೆಗೆದು ಕೊಲ್ಲದೆ ಇಲ್ಲಿಂದ ಹೋಗುವಂತಿಲ್ಲ , ನಾನು ಬಂದು ಕುಂಕುಮ ಕೊಡುವ ತನಕ ಹೊಸ್ತಿಲ ದಾಟ ಬೇಡ , ಇದೊ ಈಗ ಬಂದೆ ಅರಿಶಿನ ಕುಂಕುಮ ತೆಗೆದುಕೊಂಡು ಹೋಗು'' ಎಂದು ಹೇಳಿ ಒಳ ಹೋದಳು
ಒಳಗೆ ಹೋದ ನಂತರ ಯೋಚಿಸುತ್ತಾಳೆ ನಾನು ಕುಂಕುಮ ಕೊಟ್ಟರೆ ಮಾತ್ರ ಇಲ್ಲಿಂದ ಹೊರತು ಹೋಗುತ್ತಾಳೆ , ಆಮೇಲೆ ನನ್ನ ಗಂಡನ ಮನೆ ದಟ್ಟ ದರಿದ್ರ ವಾಗುತ್ತೆ ಹೋದ ಮನೆಗೆ ಒಳ್ಳೆ ಹೆಸರು ತರ ಬೇಕು ಎಂದು ಅಪ್ಪ ಅಮ್ಮ ಹೇಳ್ತಾ ಇದ್ದರು ಹಾಗಾಗಿ ನಾನು ಪ್ರಾಣ ತ್ಯಾಗ ಮಾಡಿ ತಾಯಿ ಲಕ್ಷ್ಮಿ ಇಲ್ಲೇ ಇರುವಂತೆ ಮಾಡುತ್ತೇನೆ ಎಂದವಳೇ ಹಿತ್ತಲಿನಲ್ಲಿದ್ದ ಬಾವಿಗೆ ಹಾರಿ ಪ್ರಾಣ ತ್ಯಾಗ ಮಾಡಿದಳು. ಇತ್ತ ಲಕ್ಷ್ಮಿ ಎಷ್ಟು ಹೊತ್ತಾದರೂ ಅಕ್ಕ ಬಾರದ್ದರಿಂದ ಮತ್ತೆ ಮನೆಯ ಒಳಗೆ ಹೋಗಿ ಅಲ್ಲೇ ಶಾಶ್ವತ ವಾಗಿ ನೆಲೆಸಿದಳು . ಅಕ್ಕನ ಜಾಣ ತನ ದಿಂದ ಅವಳ ಗಂಡನ ಮನೆಯಲ್ಲಿ ಲಕ್ಷ್ಮಿ ಶಾಶ್ವತವಾಗಿ ಉಳಿದಳು ಎಂಬಲ್ಲಿಗೆ ಅರಿಶಿನ-ಕುಂಕುಮ ಕೊಡುವ ಪದ್ಧತಿ ಜಾರಿಯಾದ ಈ ಸುಂದರ ಕಥೆ ಇಲ್ಲಿಗೆ ಮುಕ್ತಾಯ ವಾಯಿತು.

Tuesday, May 26, 2015

kavyamayee: ಮುಂದೇನು ???

kavyamayee: ಮುಂದೇನು ???: ನಾಳೆ ಏನಾಗುವುದು ಎಂದು ಯಾರೂ ಅರಿಯರು  ಇಂದು ಏನಾಗುವುದು ಎಂಬ ಕುರುಹು ಅರಿಯರು  ಇಂದು-ನಾಳೆಗಳ ಮಧ್ಯೆ ಮುಂದಿನ ಜೀವನ ಅಗೋಚರ !  ಸೀತಾ ಮಾತೆಯಂತಹವರ...